Skip to main content

Posts

Kichcha Sudeep: ನಿಮ್ಗೆ ದರ್ಶನ್‌, ಯಶ್‌ ಮಾತ್ರ ಕಾಣೋದಾ? ಧ್ರುವ ಪರ ನಿಂತ ಸುದೀಪ್‌!

 Kichcha Sudeep: ನಟ ದರ್ಶನ್‌ ಮತ್ತು ಧ್ರುವ ಸರ್ಜಾ ನಡುವಿನ ಮನಸ್ತಾಪದ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲ ಮೂಡಿಸಿವೆ. ಬೆಂಗಳೂರು:  ನಟ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಮನಸ್ತಾಪ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ, ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಇಬ್ಬರು ಸ್ಟಾರ್‌ ನಟರ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುವುದು ಮತ್ತೊಮ್ಮೆ ಬಹಿರಂಗವಾಗಿದ್ದು, ಇದಕ್ಕೆ ಕಾರಣ ಕಿಚ್ಚ ಸುದೀಪ್‌ ಅವರು ನೀಡಿರುವ ಹೇಳಿಕೆ. ಹೌದು, ಕೆಸಿಸಿ ಕ್ರಿಕೆಟ್‌ ಕಪ್‌ ಕುರಿತ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್‌ ಅವರು ಆಡಿರುವ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕಾವೇರಿ ನೀರಿಗಾಗಿ ನಡೆದ ಪ್ರತಿಭಟನೆ ವೇಳೆ ದರ್ಶನ್‌ ಮತ್ತು ಧ್ರುವ ಸರ್ಜಾ ಪರಸ್ಪರ ಮಾತನಾಡದ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ನಂತರ ದರ್ಶನ್‌ ಜತೆ ಮನಸ್ತಾಪ ಇರುವುದು ನಿಜ ಎಂದು ಧ್ರುವ ಹೇಳಿದ್ದರು. ಹೀಗಾಗಿ ಧ್ರುವ ಸರ್ಜಾರನ್ನು ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್‌ ಅಭಿಮಾನಿಗಳು ಟ್ರೋಲ್‌ ಮಾಡಿದ್ದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ವರದಿಗಾರರೊಬ್ಬರು ಕೆಸಿಸಿ ಪಂದ್ಯಗಳಿಗೆ ದರ್ಶನ್, ಯಶ್, ರಿಷಬ್‌ ಶೆಟ್ಟಿ, ರಕ್ಷಿತ್‌ ಶೆಟ್ಟಿ, ರಾಜ್‌ ಬಿ ಶೆಟ್ಟಿ ಅವರನ್ನು ಕರೆದಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ...
Recent posts

Actress Leelavathi: ನಟಿ ಲೀಲಾವತಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ, ಡಿಸಿಎಂ ಸೇರಿ ಗಣ್ಯರು

 Actress Leelavathi: ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು, ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಬೆಂಗಳೂರು:  ನೆಲಮಂಗಲದ ಅಂಬೇಡ್ಕರ್‌ ಮೈದಾನದ ಬಳಿಕ ಹಿರಿಯ ನಟಿ ಲೀಲಾವತಿ ಅವರ (Actress Leelavathi) ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯರಿಯೂರಪ್ಪ ಸೇರಿ ರಾಜಕೀಯ ನಾಯಕರು ಹಾಗೂ ಚಿತ್ರರಂಗದ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಅಂತಿಮ ದರ್ಶನ ಪಡೆದ ಬಳಿಕ ವಿನೋದ್‌ ರಾಜ್‌ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತಬ್ಬಿಕೊಂಡು ಸಾಂತ್ವನ ಹೇಳಿದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಚಿವ ಸೋಮಣ್ಣ, ವಾಟಾಳ್‌ ನಾಗರಾಜ್‌, ನಟ ರಮೇಶ್‌ ಅರವಿಂದ್‌, ಉಪೇಂದ್ರ, ದ್ವಾರಕೀಶ್, ಶ್ರೀನಾಥ್‌, ಸಾಧು ಕೋಕಿಲ, ನಟಿ ತಾರಾ, ಶೃತಿ, ಉಮಾಶ್ರೀ, ಪೂಜಾ ಗಾಂಧಿ, ಸುಧಾರಾಣಿ ಮತ್ತಿತರ ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಲೀಲಾವತಿ ಅವರ ಅಂತಿಮ ದರ್ಶನ ಪಡೆದರು. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಅಂತಿಮ ನಮನ ಸಲ್ಲಿಸಿದರು ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ದರ...

Kiccha Sudeep: ಬಿಗ್‌ಬಾಸ್‌ನಲ್ಲಿ ಬಾಲಿವುಡ್‌ನವರನ್ನು ಮೀರಿಸಿದ ಕಿಚ್ಚ ಸುದೀಪ್‌ ಡ್ರೆಸ್‌! ಏನಿದರ ಸ್ಪೆಷಲ್‌?

  ಬಿಗ್‌ಬಾಸ್‌ನಲ್ಲಿ ಕಿಚ್ಚ ಸುದೀಪ್‌ (Kiccha Sudeep) ವೀಕೆಂಡ್‌ನಲ್ಲಿ ಧರಿಸುವ ಯೂನಿಕ್‌ ಔಟ್‌ಫಿಟ್‌ಗಳನ್ನು ನೋಡಲು ಅಭಿಮಾನಿಗಳು ಮಾತ್ರವಲ್ಲ, ಫ್ಯಾಷನ್‌ ಪ್ರಿಯರು ಕಾದಿರುತ್ತಾರೆ. ಇದಕ್ಕೆ ಕಾರಣ ಪ್ರತಿಬಾರಿ ಅವರು ಧರಿಸುವ ಯೂನಿಕ್‌ ಫ್ಯಾಷನ್‌! ಅವರ ಈ ಡಿಫರೆಂಟ್‌ ಡಿಸೈನರ್‌ವೇರ್ಸ್ ಬಗ್ಗೆ ಇಲ್ಲಿದೆ ಸಂಕ್ಷೀಪ್ತ ಡಿಟೇಲ್ಸ್. ಬೆಂಗಳೂರು:  ಪ್ರತಿವಾರ ಬಿಗ್‌ಬಾಸ್‌ನಲ್ಲಿ ಕಿಚ್ಚ ಸುದೀಪ್‌ ಯಾವ ಔಟ್‌ಫಿಟ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಕೇವಲ ಅವರ ಅಭಿಮಾನಿಗಳಿಗಷ್ಟೇ ಅಲ್ಲ, ಫ್ಯಾಷನ್‌ ಪ್ರಿಯರಿಗೂ ಕುತೂಹಲವಿರುತ್ತದೆ. ಹೌದು. ಸುದೀಪ್‌ರವರು ಪ್ರತಿ ವೀಕೆಂಡ್‌ನಲ್ಲಿ ಧರಿಸುವ ಒಂದೊಂದು ಡಿಫರೆಂಟ್‌ ಔಟ್‌ಫಿಟ್‌ಗಳು ನೋಡುಗರ ಕಣ್ಣರಳಿಸುತ್ತವೆ. ಕೆಲವೊಮ್ಮೆ ಬಾಲಿವುಡ್‌ಗರನ್ನು ಮೀರಿಸುವಂತಹ ಹುಬ್ಬೇರಿಸುವಂತಹ ಫ್ಯೂಶನ್‌ ಡಿಸೈನರ್‌ವೇರ್‌ಗಳನ್ನು ಕಾಣಬಹುದು. ಈ ಡಿಸೈನರ್‌ವೇರ್‌ಗಳ ಹಿಂದಿರುವ ಡಿಸೈನರ್‌ಗಳ್ಯಾರು? ಡಿಸೈನ್‌ ಆಯ್ಕೆ ಹೇಗೆ? ಅಷ್ಟ್ಯಾಕೆ ದುಬಾರಿ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ವಿವರ. ವಾರಕ್ಕೆ ಇಬ್ಬರ ಡಿಸೈನರ್ಸ್ ಔಟ್‌ಫಿಟ್ಸ್ ಧರಿಸುವ ಸುದೀಪ್‌ ವಾರಕ್ಕೆ ಇಬ್ಬರ ಡಿಸೈನರ್ಸ್ ಔಟ್‌ಫಿಟ್ಸ್ ಧರಿಸುವ ಸುದೀಪ್‌ಗೆ ಸೂಟನ್ನು ರ‍್ಯಾಂಪ್‌ ಲೆಬೆಲ್‌ನ ಸೆಲೆಬ್ರೆಟಿ ಡಿಸೈನರ್‌ ಭರತ್‌ ರಾಮ್‌ದಾಸ್‌ ಸಿದ್ಧಪಡಿಸಿದರೇ, ಜಂಪ್‌ಸೂಟ್‌ನಂತವನ್ನು ಡಿಸೈನರ್‌ ಭರತ್‌ ಸಾಗರ್‌ ಸಿದ್ಧಪಡಿಸಿ, ಸ್ಟೈಲಿಂಗ್‌ ಮಾಡು...

Pooja Gandhi: ಮಳೆ ಹುಡುಗಿಗೆ ಮಂತ್ರ ಮಾಂಗಲ್ಯ; ಹೊಸ ಬಾಳಿಗೆ ಕಾಲಿಟ್ಟ ಪೂಜಾ ಗಾಂಧಿ

  Pooja Gandhi: ಬೆಂಗಳೂರಿನ ಉದ್ಯಮಿ ವಿಜಯ್ ಘೋರ್ಪಡೆ ಅವರೊಂದಿಗೆ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿತ್ರ ರಂಗದ ಗಣ್ಯರು, ಅಭಿಮಾನಿಗಳು ನವದಂಪತಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರು:  ನಟಿ ಪೂಜಾ ಗಾಂಧಿ (Pooja Gandhi) ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಹಾಗೂ ಬಹುಕಾಲದ ಗೆಳೆಯ ವಿಜಯ್ ಘೋರ್ಪಡೆ ಅವರನ್ನು ಮಳೆ ಹುಡುಗಿ ಮದುವೆಯಾಗಿದ್ದು, ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಬಂಧು-ಮಿತ್ರರು, ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಸರಳವಾಗಿ ಬುಧವಾರ ವಿವಾಹವಾಗಿದ್ದಾರೆ. ವಿವಾಹ ಸಮಾರಂಭದಲ್ಲಿ ನಿರ್ದೇಶಕ ಯೋಗರಾಜ್ ಭಟ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಸಾಹಿತಿ ಜಯಂತ್ ಕಾಯ್ಕಿಣಿ, ನಟಿ ಸುಧಾರಣಿ, ಶುಭಾ ಪೂಂಜಾ, ನಿರ್ದೇಶಕಿ ಸುಮನಾ ಕಿತ್ತೂರು ಮತ್ತಿತರರು ಭಾಗವಹಿಸಿ, ನವ ದಂಪತಿಗೆ ಶುಭ ಕೋರಿದರು. ಮೂಲತಃ ಉತ್ತರ ಪ್ರದೇಶದವರಾದ ಪೂಜಾ ಗಾಂಧಿ ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತ ಬೆಂಗಳೂರಿನಲ್ಲೇ ಕೆಲವು ಸಮಯದಿಂದ ನೆಲೆಸಿದ್ದಾರೆ. ತಮ್ಮ ಕನ್ನಡ ಪ್ರೀತಿಯಿಂದಲೇ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ. ಕನ್ನಡ ಮಾತನಾಡಲು ಅಷ್ಟೇ ಅಲ್ಲ ಓದಲು ಮತ್ತು ಬರೆಯಲು ಅವರು ಕಲಿತಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿರುವುದಾಗಿ ಮಾಹಿತಿ ಇದೆ. ಪೂಜಾ ಗಾಂಧಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಕನ್ನಡ ಕಲಿತು ಕ...

Rishab Shetty: ವಿಶೇಷ ಜ್ಯೂರಿ ಅವಾರ್ಡ್ ತಮ್ಮ ನೆಚ್ಚಿನ ನಟನಿಗೆ ಅರ್ಪಿಸಿದ ರಿಷಬ್‌ ಶೆಟ್ಟಿ, ಯಾರವರು?

  Rishab Shetty: ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ಪಡೆದ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಹಿರಿಯ ನಟ ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ. ಬೆಂಗಳೂರು:  ಕಳೆದ ವರ್ಷ ತೆರೆಕಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರ ‘ಕಾಂತಾರ’ (Kantara). ರಿಷಬ್‌ ಶೆಟ್ಟಿ (Rishab Shetty) ಈ ಚಿತ್ರವನ್ನು ನಿರ್ದೇಶಿಸಿ, ನಾಯಕನಾಗಿ ಕಾಣಿಸಿಕೊಂಡಿದ್ದರು. ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿದ್ದ ಈ ಚಿತ್ರ ಬರೋಬ್ಬರಿ 400 ಕೋಟಿ ರೂ. ಗಳಿಸಿತ್ತು. ಈ ಎಲ್ಲ ಹೆಗ್ಗಳಿಕೆ ನಡುವೆ ‘ಕಾಂತಾರ’ ಮುಡಿಗೆ ಇನ್ನೊಂದು ಗರಿ ಸಿಕ್ಕಿದೆ. ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ʼಕಾಂತಾರʼ ಸಿನಿಮಾ ಚೊಚ್ಚಲ ಆವೃತ್ತಿಯ ʼಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿದೆ. ರಿಷಬ್‌ ಶೆಟ್ಟಿ ಅವರಿಗೆ ವಿಶೇಷ ಜ್ಯೂರಿ ಅವಾರ್ಡ್ (Special Jury Award) ಲಭಿಸಿದ್ದು, ಅದನ್ನು ಅವರು ಹಿರಿಯ ನಟ ಶಂಕರ್‌ ನಾಗ್‌ (Shankar Nag) ಅವರಿಗೆ ಅರ್ಪಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪತ್ರವೊಂದನ್ನು ಹಂಚಿಕೊಂಡಿರುವ ರಿಷಬ್‌ ಶೆಟ್ಟಿ ಈ ಪ್ರಶಸ್ತಿಯನ್ನು ಶಂಕರ್‌ ನಾಗ್‌ ಅವರಿಗೆ ಅರ್ಪಿಸಿದ್ದಾರೆ. ʼ54ನೇ ಗೋವಾ ಇಂಟರ್‌ ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ ಆಫ್‌ ಇಂಡಿಯಾ ಸ್ಪೆಷಲ್‌ ಜ್ಯೂರಿ ಅವಾರ್ಡ್‌ ಹೊರಕಿದ್ದು ಎಂದೂ ಮರೆಯಾಗ...

Kantara Movie: ಯೂಟ್ಯೂಬ್​ನಲ್ಲಿ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್; ವೀವ್ಸ್ ಎಷ್ಟು?

 K antara Movie: ಯೂಟ್ಯೂಬ್​ನಲ್ಲಿ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆ ಬರೆದಿದೆ. ಯೂಟ್ಯೂಬ್​ನಲ್ಲಿ24 ಗಂಟೆಗಳಲ್ಲಿ ವೀಕ್ಷಿಸಿದ್ದು ಎಷ್ಟು ಮಂದಿ ಗೊತ್ತೆ? ಬೆಂಗಳೂರು:  ಕಳೆದ ವರ್ಷ ತೆರೆಕಂಡ ʼಕಾಂತಾರʼ ಚಿತ್ರ (Kantara Movie) ಸೂಪರ್‌ ಹಿಟ್‌ ಆಗಿತ್ತು. ಕನ್ನಡ ಮಾತ್ರವಲ್ಲ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಅದರ ಎರಡನೇ ಭಾಗ ಬರುತ್ತದೆ ಎನ್ನುವಾಗಲೇ ಸಾಕಷ್ಟು ಕುತೂಹಲ ಮೂಡಿತ್ತು. ಅದರಂತೆ ನವೆಂಬರ್ 27ರಂದು ರಿಲೀಸ್ ಆದ ‘ಕಾಂತಾರ ಚಾಪ್ಟರ್ 1’ ಫಸ್ಟ್ ಲುಕ್ ಟೀಸರ್ ದಾಖಲೆಯ ವೀಕ್ಷಣೆ ಕಂಡಿದೆ. ಏಳು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಟೀಸರ್ ಬರೋಬ್ಬರಿ 12 ಮಿಲಿಯನ್ (1.2 ಕೋಟಿ) ಭಾರಿ ವೀಕ್ಷಣೆ ಕಂಡಿದೆ. ಈ ಮೂಲಕ ಹಲವು ದಾಖಲೆಗಳನ್ನು ಇದು ಸರಿಗಟ್ಟಿದೆ. ನವೆಂಬರ್ 27ರಂದು ಕುಂದಾಪುರ ಆನೆಗುಡ್ಡೆ ದೇವಾಲಯದಲ್ಲಿ ಚಿತ್ರತಂಡ ಸ್ಕ್ರಿಪ್ಟ್ ಪೂಜೆ ಮಾಡಿದೆ. ಜತೆಗೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿತ್ತು. ʼಕಾಂತಾರʼ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲ್ಮ್ಸ್‌ ಈ ಚಿತ್ರವನ್ನೂ ತಯಾರಿಸಲಿದೆ. ಈ ಬಾರಿ ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ. ರಿಷಬ್ ಶೆಟ್ಟಿ ಒಂದು ಕೈಯಲ್ಲಿ ತ್ರಿಶೂಲ, ಮತ್ತೊಂದು ಕೈಯಲ್ಲಿ ಖಡ್ಗ ಹಿಡಿದಿರು...

SOUTH CINEMA Rishab Shetty: ಕಾಂತಾರ 2ನಿಂದ ಮಹತ್ವದ ಅಪ್‌ಡೇಟ್‌!

  Rishab Shetty: ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರು: ʻ ಕಾಂತಾರʼ  ರಿಷಬ್ ಶೆಟ್ಟಿ  (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ʻʻಇದು ಬರೀ ಬೆಳಕಲ್ಲ. ದರ್ಶನ. ನವೆಂಬರ್ 27ಕ್ಕೆ ಚಿತ್ರದ ಫಸ್ಟ್‌ ಲುಕ್ ರಿವೀಲ್ʼʼಎಂದು ರಿಷಬ್‌ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕಾಂತಾರ 1ರ ಪ್ರಮುಖ ಹೈಲೈಟ್‌ ಎಂದರೆ ʻವರಾಹ ರೂಪಂʼ ಹಾಡು. ಈ ಹಾಡು ವಿವಾದಕ್ಕೆ ಎಷ್ಟು ಕಾರಣವಾಗಿತ್ತೋ ಅಷ್ಟೇ ಖ್ಯಾತಿಯನ್ನು ಪಡೆಯಿತು. ʼಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕ...